← ಶ್ರೀಕೃಷ್ಣ

ತಿರುದುಂಬುವ ನೀನು ತಿರುಮಲೇಶಾ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ತಿರುದುಂಬುವ ನೀನು ತಿರುಮಲೇಶಾ
ಮರುಗಲ್ಯಾತಕೆ ಇನ್ನು ಮನಸಿನೊಳಗೆ ಪ್ರತಿದಿನವು

ಬಲಿರಾಯ ಬಲು ದಾನವನು ಮಾಡುತಿರಲಾಗಿ
ಇಳಿಯ ಸುರವೇಷವನು ಧರಿಸಿ ಪೋಗಿ
ಹಲುಬಿ ಬಾಯಿದೆರದು ತ್ರಿಪಾದ ತಿರಕೆ ಕೊಂಡು
ನಿಳಿಯ ಬಾಗಿಲ ಕಾಯ್ದೊ ನಿಗಮ ಕುಲದಾತಾರಾ ||1||

ಗೋಪಳ್ಳಿಯಲಿ ಜನಿಸಿ ಗೋವುಗಳ ಕಾವುತ್ತ
ಗೋಪಾಲತತಿ ವಡನೆ ವಡನಾಡುತ
ತಾಪಸರು ಯಜ್ಞ ಕರ್ಮಾದಿಗಳು ಮಾಡುತಿರೆ
ಶ್ರೀಪತಿ ಅನ್ನ ತಿರಿದುಂಡು ಕ್ಷುದಿಯನ್ನ ಕಳೆದೆ ||2||

ಅಂದು ಈ ಪರಿಯ ಯಾಚಕ ವೃತ್ತಿಯನು ಮಾಡಿ
ಇಂದೆನ್ನ ಹೃತ್ಕಮಲದೊಳಗೆ ಬಂದೂ
ನಿಂದು ಮನೆಮನೆ ತಿರದುಂಬುವ ನೀನಲ್ಲವೆ
ಸಂದೇಹವೇಕೆ ಎನಗೆ ವಿಜಯವಿಠ್ಠಲರೇಯಾ ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.