← ಶ್ರೀಕೃಷ್ಣ

ನಾಮತ್ರಯ ನೆನೆಯಿರೊ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ನಾಮತ್ರಯ ನೆನೆಯಿರೊ
ಕಾಮಕ್ರೋಧವು ಹರಿದು ಬೈಲಾಗಿ ಪೋಗುವುದು

ಅಚ್ಯುತಾ ಅಚ್ಯುತಾ ಎಂದು ಸ್ಮರಣೆಯನು ಮಾಡಿದರೆ
ದುಶ್ಚರಿತವೆಂಬ ಮಹ ಕಾನನಕ್ಕೆ
ಕಿಚ್ಚಾಗಿ ದಹಿಸುವುದು ನಿಮಿಷದೊಳಗೆ ಶುದ್ಧ
ನಿಚ್ಚಳವಾಗಿದ್ದ ಸುಜ್ಞಾನ ಪಾಲಿಪದು||1||

ಅನಂತ ಅನಂತ ಎಂದು ಮನದಲ್ಲಿ ನೆನೆಯೆ
ನಾನಾ ಭವಬಂಧ ದುಷ್ಕರ್ಮದಿ
ಹೀನಾಯವನು ಕಳೆದು ಹಿತದಿಂದಲಿ ವೊಲಿದು
ಆನಂದ ಆನಂದವಾದ ಫಲ ಕೊಡುವುದು. ||2||

ಗೋವಿಂದ ಗೋವಿಂದ ಎಂದು ಧ್ಯಾನವ ಮಾಡೆ
ಗೋವಿಂದ ಕಡೆಹಾಕಿ ಸಾಕುವದು
ದೇವೇಶ ಶಿರಪತಿ ವಿಜಯವಿಠ್ಠಲೇಶನ
ಸೇವೆ ಸತ್ಕಾರ್ಯದಲಿ ಪರಿಪೂರ್ಣವಾಗಿಹುದು ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.