← ಶ್ರೀಕೃಷ್ಣ

ನಿನ್ನ ಮಹಿಮೆ ಇದೇನೊ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ನಿನ್ನ ಮಹಿಮೆ ಇದೇನೊ
ಕನ್ನಗಾರರ ಗುರುವೆ ಅಳಗಿರಿ ತಿಮ್ಮರಾಯಾ

ಕ್ಷೋಣಿಯೊಳಗುಳ್ಳವರು ಕ್ಷಿಪ್ರದಲ್ಲಿ
ನಿನ್ನ ಕಾಣಿವೇನೆಂಬ ತವಕದಲಿ ಬರಲು
ಮಾಣದಲೆ ಅವರ ವಸನ ಸುಲಿಸಿ ತಡೆಯದೆ
ಮಾನವನು ಕೊಂಬ ಅಭಿಮಾನಗೇಡಿ ||1||

ಬ್ರಹ್ಮಾದಿಗಳು ಇಲ್ಲಿ ಸುಲಿಸಿಕೊಳಬೇಕೆಂದು
ಹೆಮ್ಮೆಯಿಂದಲಿ ನೋಡಿ ಹಿಗ್ಗುವರೋ
ಹಮ್ಮಿನದೇವ ನಿನ್ನ ಸೋಜಿಗವೆ ತಿಳಿಯದು
ಈ ಮ್ಮಹಿಯೊಳಗೆ ಇಂಥ ಸುಮ್ಮಾನವೇನೊ||2||

ಹಲವು ಕೇಳಿದರೇನು ನೀಚೋಚ್ಚ ಎಣಿಸಲೆ
ಒಲಿಸಿದವರಿಗೆ ನೀನು ಒಲಿದು ಎಲ್ಲಾ
ಸುಲಿಗೆಯನು ಯಿತ್ತು ಸಂತತಲವರ ಪಾಲಿಪ
ಬಲು ದೈವ ವಿಜಯವಿಠ್ಠಲ ಅಳಗಿರಿ ತಿಮ್ಮಾ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.