← ಶ್ರೀಕೃಷ್ಣ
ನಿನ್ನನಗಲಿ ಪೋಗಲಾರೆವೋ
ನಿನ್ನನಗಲಿ ಪೋಗಲಾರೆವೋ ನೀರಜಾಕ್ಷ
ನಿನ್ನ ಸೇರಿ ಸುಖಿಸ ಬಂದೆವೊ
ಮನ್ನಿಸದೆ ಮಮತೆಯಿಂದ ಭಿನ್ನ ನುಡಿಗಳಾಡಿ ನಮಗೆ
ಹಣ್ಣು ತೋರಿ ಕಾಳಕೂಟವನ್ನು ಕೊಡುವರೇನೊ ಕೃಷ್ಣ
ಐದುವದಕೆ ಶಕ್ಯವಲ್ಲದ ಅಪ್ರಮೇಯ
ಆದಿಪುರುಷ ಅಮರಸನ್ನುತ
ಶ್ರೀದ ನಮ್ಮ ಕೈಯ ಬಿಡದೆ ಆದರಿಸಬೇಕು ಪರವ-
ರಾದರೇನು ನಿನ್ನ ಶರಣರಾದ ಮೇಲೆ ಬಿಡುವುದುಂಟೆ||1||
ಬಂಧುವರ್ಗವನ್ನು ಬಿಡುವುದು ಸ್ತ್ರೀಯರಿಗೆ
ನಿಂದ್ಯವೆಂದು ಶಾಸ್ತ್ರ ಪೇಳ್ವುದು
ಎಂದೆಗೆಂದಿಗೆಮಗೆ ನೀನೆ ಬಂಧುವೆಂದು ಬಂದಿಹೆವೊ
ಸಿಂಧುಶಯನ ಎಮ್ಮನ್ಯಾಕೆ ಇಂದು ಹೋಗಿರೆಂಬೆ ನೀನು||2||
ಶಮದಮಾದಿ ಗುಣಗಳಿಂದಲಿ ಸಜ್ಜನರು
ಕ್ರಮದಿ ನಿನ್ನ ಮೂರ್ತಿ ಮನದಲಿ
ಮಮತೆಯಿಂದ ಪೂಜಿಸುತ್ತ ಗಮಿಸುವರೊ ನಿನ್ನ ಪುರಕೆ
ನಮಗೆ ಮಾತ್ರ ಪತಿಸುತಾದ್ಯರಮಿತ ಸುಖವ ಕೊಡುವರೇನೊ ||3||
ಮೋಕ್ಷ ಇಚ್ಛೆಯಿಂದ ನಿನ್ನನು ಭಜಿಪ ಜನರಾ
ಪಕ್ಷ ವಹಿಸಿದಂತೆ ನಮ್ಮನು
ರಕ್ಷಿಸದೆ ಬಿಡುವರೇ ಕಟಾಕ್ಷದಿಂದ ಈಕ್ಷಿಸದೆ
ಲಕ್ಷ್ಮೀದೇವಿ ನಿಮಗೆ ಬಹಳಾಪೇಕ್ಷೆಯಿಂದ ಮೋಹಿಸಿದಳೆ ||4||
ಅನಘ ನಿನ್ನ ನೋಡಿ ಮೋಹಿಸಿ ಅಂತರಾತ್ಮ
ತನುವು ಮನವು ನಿನಗೆ ಅರ್ಪಿಸಿ
ಜನನ ಮರಣದಿಂದ ಜನರು ದಣಿವರೇನೂ ಕಾಂತ ನಮ್ಮ
ಮನಸಿನಂತೆ ಒಲಿದು ಸಲಹೊ ವನಜನಾಭ ವಿಜಯವಿಠ್ಠಲ ||5||
ನಿನ್ನ ಸೇರಿ ಸುಖಿಸ ಬಂದೆವೊ
ಮನ್ನಿಸದೆ ಮಮತೆಯಿಂದ ಭಿನ್ನ ನುಡಿಗಳಾಡಿ ನಮಗೆ
ಹಣ್ಣು ತೋರಿ ಕಾಳಕೂಟವನ್ನು ಕೊಡುವರೇನೊ ಕೃಷ್ಣ
ಐದುವದಕೆ ಶಕ್ಯವಲ್ಲದ ಅಪ್ರಮೇಯ
ಆದಿಪುರುಷ ಅಮರಸನ್ನುತ
ಶ್ರೀದ ನಮ್ಮ ಕೈಯ ಬಿಡದೆ ಆದರಿಸಬೇಕು ಪರವ-
ರಾದರೇನು ನಿನ್ನ ಶರಣರಾದ ಮೇಲೆ ಬಿಡುವುದುಂಟೆ||1||
ಬಂಧುವರ್ಗವನ್ನು ಬಿಡುವುದು ಸ್ತ್ರೀಯರಿಗೆ
ನಿಂದ್ಯವೆಂದು ಶಾಸ್ತ್ರ ಪೇಳ್ವುದು
ಎಂದೆಗೆಂದಿಗೆಮಗೆ ನೀನೆ ಬಂಧುವೆಂದು ಬಂದಿಹೆವೊ
ಸಿಂಧುಶಯನ ಎಮ್ಮನ್ಯಾಕೆ ಇಂದು ಹೋಗಿರೆಂಬೆ ನೀನು||2||
ಶಮದಮಾದಿ ಗುಣಗಳಿಂದಲಿ ಸಜ್ಜನರು
ಕ್ರಮದಿ ನಿನ್ನ ಮೂರ್ತಿ ಮನದಲಿ
ಮಮತೆಯಿಂದ ಪೂಜಿಸುತ್ತ ಗಮಿಸುವರೊ ನಿನ್ನ ಪುರಕೆ
ನಮಗೆ ಮಾತ್ರ ಪತಿಸುತಾದ್ಯರಮಿತ ಸುಖವ ಕೊಡುವರೇನೊ ||3||
ಮೋಕ್ಷ ಇಚ್ಛೆಯಿಂದ ನಿನ್ನನು ಭಜಿಪ ಜನರಾ
ಪಕ್ಷ ವಹಿಸಿದಂತೆ ನಮ್ಮನು
ರಕ್ಷಿಸದೆ ಬಿಡುವರೇ ಕಟಾಕ್ಷದಿಂದ ಈಕ್ಷಿಸದೆ
ಲಕ್ಷ್ಮೀದೇವಿ ನಿಮಗೆ ಬಹಳಾಪೇಕ್ಷೆಯಿಂದ ಮೋಹಿಸಿದಳೆ ||4||
ಅನಘ ನಿನ್ನ ನೋಡಿ ಮೋಹಿಸಿ ಅಂತರಾತ್ಮ
ತನುವು ಮನವು ನಿನಗೆ ಅರ್ಪಿಸಿ
ಜನನ ಮರಣದಿಂದ ಜನರು ದಣಿವರೇನೂ ಕಾಂತ ನಮ್ಮ
ಮನಸಿನಂತೆ ಒಲಿದು ಸಲಹೊ ವನಜನಾಭ ವಿಜಯವಿಠ್ಠಲ ||5||