← ಶ್ರೀಕೃಷ್ಣ

ಮನ್ನಿ ಮನ್ನಿಗೆ ಉಣ್ಣ ಬಂದಾ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಮನ್ನಿ ಮನ್ನಿಗೆ ಉಣ್ಣ ಬಂದಾ |
ತನ್ನವರೊಳಗಿದ್ದ ಸರ್ವ ಸಾರಭೋಕ್ತಾ

ಭಕುತರಗೋಸುಗ ಭಕುತಿಯ ಕೈಕೊಂಡು
ಕರುಣಾಂಬುಧಿ ಇಂದು ||1||

ಭೂವದರೊಳಗಿದ್ದು ದೈತ್ಯರ ಗೆದ್ದಂತೆ |
ಆವಿಷ್ಣುವಾಗಿ ಮನ್ನಣೆಯ ಕೈಕೊಳುವಲಿ ||2||

ನಂಬಿದ ದಾಸರ್ಗೆ ಪ್ರಾರಬ್ಧ ಕರ್ಮವು |
ಉಂಬೋದು ಬಿಡದಂದು ತದಾಕಾರ ರೂಪದಿ3
ಅವರವರ ಯೋಗ್ಯತೆ ಫಲ ಕೊಡುವೆನೆಂದು |
ದಿವಿಜರ ಒಡಗೂಡಿ ದಿನ ಪ್ರತಿದಿನದಲ್ಲಿ ||4||

ತನ್ನ ಸಂಕಲ್ಪವು ಸಿದ್ಧಿ ಮಾಡುವೆನೆಂದು
ಘನ್ನತೆಯಲಿ ನಮ್ಮ ವಿಜಯವಿಠ್ಠಲಸ್ವಾಮಿ ||5||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.