← ಶ್ರೀಕೃಷ್ಣ

ಶ್ರೀಶ ಕೊಳಲನೂದಿದನಂದು ಶ್ರೀಧರನಿಂದು

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಶ್ರೀಶ ಕೊಳಲನೂದಿದನಂದು ಶ್ರೀಧರನಿಂದು
ವಾಸವ ವಂದಿತ ವಾತಜ ಸೇವಿತ
ವಾಸುಕಿಶಯನನು ವಾರೆ ಸುನೋಟದಿ

ಬೆರಳ ಸಂದಿಲಿ ಮುರಳಿ ಪಿಡಿದು, ಮುರಾರಿ ತಾನು
ಹರುಷದಿಂದಲಿ ಸ್ವರವ ನುಡಿದು, ವಾರಿಜನೇತ್ರ
ಅರಳು ಮಲ್ಲಿಗೆ ಸರಗಳ ಮುಡಿದು
ಕೊರಳ ಪದಕ ಹಾರ ಕೌಸ್ತುಭ ಶೋಭಿತ
ಮರುಳು ಮಾಡುತ ಮಡದಿಯೆಲ್ಲರ ||1||

ಗೌರಿ ಗಾಂಧಾರಿ ಗೌಳಪಂತು ಗೌರೀಶ ಭೂಷಣ
ಶೌರೀ ಸಾರಂಗ ಮೋಹನವಿಂತು ಸಾವೇರಿ ಸುರುಟಿ
ಭೈರವಿ ಬ್ಯಾಗಡೆ ಊದುತ ನಿಂತು
ಮಾರಜನಕ ತಾನಾನಂದದಿಂದಲಿ
ವೀರ ಶ್ರೀ ಕೃಷ್ಣನು ವಿಧವಿಧ ರಾಗದಿ||2||

ನಾರದ ತುಂಬುರ ನಾಟ್ಯವನಾಡೆ, ನಳಿನನಾಭನ
ಗಿರಿಜಾಪತಿಯು ವಂದಿಸಿ ಬೇಡೆ, ಗೋಪಾಲಕೃಷ್ಣನ
ಭಾರತಿಪತಿ ತಾ ಕೊಂಡಾಡೆ
ವರಗುರು ವಂದಿತ ವಿಜಯವಿಠ್ಠಲರೇಯಹರುಷವ ಪಡಿಸುತ ವನಿತೆಯರೆಲ್ಲರ ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.