← ಶ್ರೀಕೃಷ್ಣ

ಹದಿನಾಲ್ಕು ಲೋಕವನಾಳುವ ತಂದೆಗೆ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಹದಿನಾಲ್ಕು ಲೋಕವನಾಳುವ ತಂದೆಗೆ |
ಮುದದಿಂದ ನಾನೊಬ್ಬ ಭಾರವಾದೆನೆ

ಸುರಗಿರಿಯು ಶರಧಿಯೊಳು ಕಡೆವಾಗ ಮುಣಗಲಾ ||
ಭರದಿಂದ ಪೋಗಿ ಚೆನ್ನಾಂತು ಪೊತ್ತೆ ||
ಧರಣಿಯು ಮೊರೆಯಿಡಲು ತೆರಳಲ್ಲಿ ಬಂದು |
ಭೂತರುಣಿಯನು ಸೆರೆಬಡಿಸಿ ಉಳುಹಿಕೊಳ್ಳಲಿಲ್ಲವೆ ||1||

ಸುರಪತಿ ಮುನಿದೇಳು ಹಗಲಿರುಳು ಮಳೆಗರೆಯೆ |
ಬೆರಳಲಿ ಧರಿಸಿ ಕಾಯ್ದು ನಿಜದೆ ||
ವರಮುನಿ ಪಸವನು ಬೇಡಲಾಗಿ ಬೆದರಿ ನರ- |
ನರಸಿ ನಿನ್ನ ಕರೆಯೆ ಕರುಣದಲಿ ಪಾಲಿಸಿದೆ ||2||

ಜಲಜಾಕ್ಷ ಬೆಟ್ಟವನು ಪೊತ್ತು ಬಳಲಿದಾಗ |
ಸಲಹಬೇಕೆಂದು ಬೇಸರಿಸಲಿಲ್ಲಾ ||
ಸುಲಭದಲಿ ಶೇಷಾಚಲನಾಗಿಪ್ಪ |
ಒಲಿದೆನ್ನ ಸಂರಕ್ಷಿಸೊ ವಿಜಯವಿಠ್ಠಲನೆ ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.