← ವಚನಗಳು
ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ,
ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ,
ಕೂರುಮ ದಿಗುದಂತಿ ದಿಗುವಳಯವ ನುಂಗಿ,
ನಿಜಶೂನ್ಯ ತಾನಾದ ಬಳಿಕ,
ತನ್ನ ತಾನರಿದ ನಿಜಪದ ಭಿನ್ನಯೋಗಕ್ಕೆ ಬಹುದೆ
ಕಂಗಳ ನೋಟದಲ್ಲಿ ಮನದ ಸೊಗಸಿನಲ್ಲಿ,
ಅನಂಗನ ದಾಳಿಯನಗಲಿದೆನಣ್ಣಾ.
ಮರೀಚಿಕಾಜಲದೊಳಡಗಿದ ಪ್ರಾಣಿ ವ್ಯಾಧನ ಬಲೆಯೊಳಗಹುದೆ
ಎನ್ನದೇವ ಚೆನ್ನಮಲ್ಲಿಕಾರ್ಜುನನಲ್ಲದೆಪರಪುರುಷರು ನಮಗಾಗದಣ್ಣಾ.
ಕೂರುಮ ದಿಗುದಂತಿ ದಿಗುವಳಯವ ನುಂಗಿ,
ನಿಜಶೂನ್ಯ ತಾನಾದ ಬಳಿಕ,
ತನ್ನ ತಾನರಿದ ನಿಜಪದ ಭಿನ್ನಯೋಗಕ್ಕೆ ಬಹುದೆ
ಕಂಗಳ ನೋಟದಲ್ಲಿ ಮನದ ಸೊಗಸಿನಲ್ಲಿ,
ಅನಂಗನ ದಾಳಿಯನಗಲಿದೆನಣ್ಣಾ.
ಮರೀಚಿಕಾಜಲದೊಳಡಗಿದ ಪ್ರಾಣಿ ವ್ಯಾಧನ ಬಲೆಯೊಳಗಹುದೆ
ಎನ್ನದೇವ ಚೆನ್ನಮಲ್ಲಿಕಾರ್ಜುನನಲ್ಲದೆಪರಪುರುಷರು ನಮಗಾಗದಣ್ಣಾ.