← ವಚನಗಳು

ಕುಲಗಿರಿಯ ಶಿಖರದ ಮೇಲೆ ಬಾಳೆ ಬೆಳೆವುದಯ್ಯಾ ಎಂದಡೆ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಕುಲಗಿರಿಯ ಶಿಖರದ ಮೇಲೆ ಬಾಳೆ ಬೆಳೆವುದಯ್ಯಾ ಎಂದಡೆ,
ಬಾಳೆ ಬೆಳೆವುದಯ್ಯಾ ಎನಬೇಕು.
ಓರೆಗಲ್ಲ ನುಗ್ಗುಗುಟ್ಟಿ ಮೆಲಬಹುದಯ್ಯಾ ಎಂದಡೆ,
ಅದು ಅತ್ಯಂತ ಮೃದು ಮೆಲಬಹುದಯ್ಯಾ ಎನಬೇಕು.
ಸಿಕ್ಕದ ಠಾವಿನಲ್ಲಿ ಉಚಿತವ ನುಡಿವುದೆ ಕಾರಣ
ಚೆನ್ನಮಲ್ಲಿಕಾರ್ಜುನ ಮತ್ರ್ಯಕ್ಕೆ ಬಂದುದಕ್ಕಿದೆ ಗೆಲವು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.