← ವಚನಗಳು
ಕಾಯದ ಕಳವಳವ ಕೆಡಿಸಿ, ಮನದ ಮಾಯೆಯ ಮಾಣಿಸಿ,
ಕಾಯದ ಕಳವಳವ ಕೆಡಿಸಿ, ಮನದ ಮಾಯೆಯ ಮಾಣಿಸಿ,
ಎನ್ನ ಹರಣವ ಮೇಲೆತ್ತಿ ಸಲಹಿದೆಯಯ್ಯಾ.
ಶಿವಶಿವಾ, ಎನ್ನ ಭವಬಂಧನವ ಬಿಡಿಸಿ,
ನಿಮ್ಮತ್ತ ತೋರಿದ ಘನವನುಪಮಿಸಬಾರದಯ್ಯಾ.
ಇರುಳೋಸರಿಸಿದ ಜಕ್ಕವಕ್ಕಿಯಂತೆ
ನಾನಿಂದು ನಿಮ್ಮ ಶ್ರೀಪಾದವನಿಂಬುಗೊಂಡು ಸುಖದೊಳೋಲಾಡುವೆನಯ್ಯಾ, ಚೆನ್ನಮಲ್ಲಿಕಾರ್ಜುನಾ.
ಎನ್ನ ಹರಣವ ಮೇಲೆತ್ತಿ ಸಲಹಿದೆಯಯ್ಯಾ.
ಶಿವಶಿವಾ, ಎನ್ನ ಭವಬಂಧನವ ಬಿಡಿಸಿ,
ನಿಮ್ಮತ್ತ ತೋರಿದ ಘನವನುಪಮಿಸಬಾರದಯ್ಯಾ.
ಇರುಳೋಸರಿಸಿದ ಜಕ್ಕವಕ್ಕಿಯಂತೆ
ನಾನಿಂದು ನಿಮ್ಮ ಶ್ರೀಪಾದವನಿಂಬುಗೊಂಡು ಸುಖದೊಳೋಲಾಡುವೆನಯ್ಯಾ, ಚೆನ್ನಮಲ್ಲಿಕಾರ್ಜುನಾ.