← ವಚನಗಳು

ಕಾಮ ಬಲ್ಲಿದನೆಂದಡೆ ಉರುಹಿ ಭಸ್ಮವ ಮಾಡಿದ.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಕಾಮ ಬಲ್ಲಿದನೆಂದಡೆ ಉರುಹಿ ಭಸ್ಮವ ಮಾಡಿದ.
ಕಾಲ ಬಲ್ಲಿದನೆಂದಡೆ ಕೆಡಹಿ ತುಳಿದ.
ಎಲೆ ಅವ್ವಾ, ನೀನು ಕೇಳಾ ತಾಯೆ.
ಬ್ರಹ್ಮ ಬಲ್ಲಿದನೆಂದಡೆ ಶಿರವ ಚಿವುಟಿಯಾಡಿದ.
ಎಲೆ ಅವ್ವಾ ನೀನು ಕೇಳಾ ತಾಯೆ.
ವಿಷ್ಣು ಬಲ್ಲಿದನೆಂದಡೆ ಆಕಳ ಕಾಯ್ದಿರಿಸಿದ.
ತ್ರಿಪುರದ ಕೋಟೆ ಬಲ್ಲಿತ್ತೆಂದಡೆ
ನೊಸಲಕಂಗಳಲುರುಹಿದನವ್ವಾ.
ಇದು ಕಾರಣ, ಚೆನ್ನಮಲ್ಲಿಕಾರ್ಜುನ ಗಂಡನೆನಗೆ,
ಜನನ ಮರಣಕ್ಕೊಳಗಾಗದ ಬಲುಹನೇನ ಬಣ್ಣಿಪೆನವ್ವಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.