← ವಚನಗಳು
ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು.
ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು.
ಮುಗಿಲು ಹರಿದು ಬಿದ್ದಡೆ ಎನಗೆ ಮಜ್ಜನಕ್ಕೆರೆದರೆಂಬೆನು.
ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು.
ಚೆನ್ನಮಲ್ಲಿಕಾರ್ಜುನಯ್ಯಾ, ಶಿರ ಹರಿದು ಬಿದ್ದಡೆ ಪ್ರಾಣ ನಿಮಗರ್ಪಿತವೆಂಬೆನು.
ಮುಗಿಲು ಹರಿದು ಬಿದ್ದಡೆ ಎನಗೆ ಮಜ್ಜನಕ್ಕೆರೆದರೆಂಬೆನು.
ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು.
ಚೆನ್ನಮಲ್ಲಿಕಾರ್ಜುನಯ್ಯಾ, ಶಿರ ಹರಿದು ಬಿದ್ದಡೆ ಪ್ರಾಣ ನಿಮಗರ್ಪಿತವೆಂಬೆನು.