← ವಚನಗಳು
ನಿತ್ಯವೆಂಬ ನಿಜಪದವೆನ್ನ ಹತ್ತೆಸಾರ್ದು ಕಂಡಬಳಿಕ
ನಿತ್ಯವೆಂಬ ನಿಜಪದವೆನ್ನ ಹತ್ತೆಸಾರ್ದು ಕಂಡಬಳಿಕ
ಚಿತ್ತ ಕರಗಿ ಮನ ಕೊರಗಿ ಹೃದಯವರಳಿತ್ತು ನೋಡಯ್ಯಾ.
ಒತ್ತಿ ಬಿಗಿದ ಸೆರೆಯೊಳಗೆ ಅತ್ತಿತ್ತಲೆಂದರಿಯದೆ
ಚೆನ್ನಮಲ್ಲಿಕಾರ್ಜುನನ ಪಾದದಲ್ಲಿ ಮರೆದೊರಗಿದೆ ನೋಡಯ್ಯಾ.
ಚಿತ್ತ ಕರಗಿ ಮನ ಕೊರಗಿ ಹೃದಯವರಳಿತ್ತು ನೋಡಯ್ಯಾ.
ಒತ್ತಿ ಬಿಗಿದ ಸೆರೆಯೊಳಗೆ ಅತ್ತಿತ್ತಲೆಂದರಿಯದೆ
ಚೆನ್ನಮಲ್ಲಿಕಾರ್ಜುನನ ಪಾದದಲ್ಲಿ ಮರೆದೊರಗಿದೆ ನೋಡಯ್ಯಾ.