← ವಚನಗಳು

ಪಡೆವುದರಿದು ನರಜನ್ಮವ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಪಡೆವುದರಿದು ನರಜನ್ಮವ,
ಪಡೆವುದರಿದು ಹರಭಕ್ತಿಯ,
ಪಡೆವುದರಿದು ಗುರುಕಾರುಣ್ಯವ,
ಪಡೆವುದರಿದು ಲಿಂಗಜಂಗಮಸೇವೆಯ,
ಪಡೆವುದರಿದು ಸತ್ಯಶರಣರನುಭಾವವ.
ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ
ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೆ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.