← ವಚನಗಳು
ಬಸವಣ್ಣನ ಪಾದವ ಕಂಡೆನಾಗಿ
ಬಸವಣ್ಣನ ಪಾದವ ಕಂಡೆನಾಗಿ
ಎನ್ನಂಗ ನಾಸ್ತಿಯಾಯಿತ್ತು.
ಚೆನ್ನಬಸವಣ್ಣನ ಪಾದವ ಕಂಡೆನಾಗಿ
ಎನ್ನ ಪ್ರಾಣಬಯಲಾಯಿತ್ತು.
ಪ್ರಭುವೆ, ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ
ಎನ್ನ ಅರಿವು ಸ್ವಯವಾಯಿತ್ತು.
ಚೆನ್ನಮಲ್ಲಿಕಾರ್ಜುನದೇವಯ್ಯಾ
ನಿಮ್ಮ ಶರಣರ ಕರುಣವ ಪಡೆದೆನಾಗಿ ನಿನಗೆ ಮತ್ತಾವುದಿಲ್ಲವಯ್ಯ ಪ್ರಭುವೆ.
ಎನ್ನಂಗ ನಾಸ್ತಿಯಾಯಿತ್ತು.
ಚೆನ್ನಬಸವಣ್ಣನ ಪಾದವ ಕಂಡೆನಾಗಿ
ಎನ್ನ ಪ್ರಾಣಬಯಲಾಯಿತ್ತು.
ಪ್ರಭುವೆ, ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ
ಎನ್ನ ಅರಿವು ಸ್ವಯವಾಯಿತ್ತು.
ಚೆನ್ನಮಲ್ಲಿಕಾರ್ಜುನದೇವಯ್ಯಾ
ನಿಮ್ಮ ಶರಣರ ಕರುಣವ ಪಡೆದೆನಾಗಿ ನಿನಗೆ ಮತ್ತಾವುದಿಲ್ಲವಯ್ಯ ಪ್ರಭುವೆ.