← ವಚನಗಳು

ಭವಭವದಲ್ಲಿ ತೊಳಲಿ ಬಳಲಿತ್ತೆನ್ನಮನ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಭವಭವದಲ್ಲಿ ತೊಳಲಿ ಬಳಲಿತ್ತೆನ್ನಮನ,
ಆನೇವೆನಯ್ಯಾ ?
ಹಸಿದುಂಡಡೆ ಉಂಡು ಹಸಿವಾಯಿತ್ತು.
ಇಂದು ನೀನೊಲಿದೆಯಾಗಿ,
ಎನಗೆ ಅಮೃತದ ಆಪ್ಯಾಯನವಾಯಿತ್ತು.
ಇದು ಕಾರಣ, ನೀನಿಕ್ಕಿದ ಮಾಯೆಯನಿನ್ನು
ಮುಟ್ಟಿದೆನಾದಡೆ ಆಣೆ, ನಿಮ್ಮಾಣೆ ಚೆನ್ನಮಲ್ಲಿಕಾರ್ಜುನಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.