← ವಚನಗಳು

ಭೃತ್ಯನಾದ ಬಳಿಕ ಕರ್ತೃವಿಂಗೆ ಉತ್ತಮ ವಸ್ತುವನೀಯಬೇಕು,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಭೃತ್ಯನಾದ ಬಳಿಕ ಕರ್ತೃವಿಂಗೆ ಉತ್ತಮ ವಸ್ತುವನೀಯಬೇಕು,
ಇದೇ ಕರ್ತೃಭೃತ್ಯರ ಭೇದ.
ಲಿಂಗಭಕ್ತನಾದಡೆ ಜಂಗಮಪಾದತೀರ್ಥಪ್ರಸಾದವ
ಲಿಂಗಕ್ಕೆ ಮಜ್ಜನ ಭೋಜನ ನೈವೇದ್ಯವ ಮಾಡಿ,
ಪ್ರಸಾದವ ಕೊಳ್ಳಬೇಕು. ಇದೇ ವರ್ಮ, ಇದೇ ಧರ್ಮ ಕಾಣಾ ಚೆನ್ನಮಲ್ಲಿಕಾರ್ಜುನಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.