← ವಚನಗಳು

ಬಿಡು ಬಿಡು ಸಂಗವ, ಸುಡುಸುಡು ವಿಷಯವ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಬಿಡು ಬಿಡು ಸಂಗವ, ಸುಡುಸುಡು ವಿಷಯವ,
ಎನ್ನೊಡೆಯರು ಬಾಗಿಲಿಗೆ ಬಂದರು,
ತಡೆಯದಿರಾ ಮರುಳೆ.
ಹಡಿಕೆಯ ಸಂಸಾರದ ಸುಖವ ಕಡೆಯಲ್ಲಿ ಹೇಸಿ,
ಇದಕ್ಕೆ ಹಿಡಿಯದಿರು ಸೆರಗನು.
ಚೆನ್ನಮಲ್ಲಿಕಾರ್ಜುನದೇವರು ಮನೆಗೆ ಬಂದಲ್ಲಿ ಇದಿರೇಳದಿರ್ದಡೆ ನಾಯಕ ನರಕ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.