← ವಚನಗಳು

ಶರಣರ ಮನ ನೋಯ ನುಡಿದೆನಾಗಿ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಶರಣರ ಮನ ನೋಯ ನುಡಿದೆನಾಗಿ,
ಹರಜನ್ಮವಳಿದು ನರಜನ್ಮಕ್ಕೆ ಬಂದೆನು.
ಹರನಟ್ಟಿದ ಬೆಸನ ಶಿರದೊಳಗಾಂತೊಡೆ,
ಗಿರಿಗಳ ಭಾರವೆನಗಾದುದಯ್ಯ.
ಚೆನ್ನಮಲ್ಲಿಕಾರ್ಜುನನ ಧರ್ಮದಿಂದ
ಸಂಸಾರ ಕರ್ಮದ ಹೊರೆಯನಿಳುಹಿ, ನಡುದೊರೆಯ ಹಾಯಿದು ಹೋದೆನು
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.