← ವಚನಗಳು
ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು.
ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು.
ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು.
ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು.
ಶಯನಕ್ಕೆ ಹಾಳು ದೇಗುಲಗಳುಂಟು.
ಚೆನ್ನಮಲ್ಲಿಕಾರ್ಜುನಯ್ಯಾ, ಆತ್ಮಸಂಗಾತಕ್ಕೆ ನೀನೆನಗುಂಟು.
ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು.
ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು.
ಶಯನಕ್ಕೆ ಹಾಳು ದೇಗುಲಗಳುಂಟು.
ಚೆನ್ನಮಲ್ಲಿಕಾರ್ಜುನಯ್ಯಾ, ಆತ್ಮಸಂಗಾತಕ್ಕೆ ನೀನೆನಗುಂಟು.