← ವಚನಗಳು

ಹೂವು ಕಂದಿದಲ್ಲಿ ಪರಿಮಳವನರಸುವರೆ ?

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಹೂವು ಕಂದಿದಲ್ಲಿ ಪರಿಮಳವನರಸುವರೆ ?
ಕಂದನಲ್ಲಿ ಕುಂದನರಸುವರೆ ?
ಎಲೆ ದೇವ, ಸ್ನೇಹವಿದ್ದ ಠಾವಿನೊಳು ದ್ರೋಹವಾದ ಬಳಿಕ
ಮರಳಿ ಸದ್ಗುಣವನರಸುವರೆ ?
ಎಲೆ ದೇವ, ಬೆಂದ ಹುಣ್ಣಿಗೆ ಬೇಗೆಯನಿಕ್ಕುವರೆ ?
ಕೇಳಯ್ಯಾ, ಶ್ರೀಶೈಲ ಚೆನ್ನಮಲ್ಲಿಕಾರ್ಜುನಾ ಹೊಳೆಯಿಳಿದ ಬಳಿಕ ಅಂಬಿಗಂಗೇನುಂಟು ?
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.