← ವಚನಗಳು
ಅಯ್ಯಾ, ಎನ್ನ ಕಾಯದಲ್ಲಿ ಮಡಿವಾಳನ ತೋರಿದ,
ಅಯ್ಯಾ, ಎನ್ನ ಕಾಯದಲ್ಲಿ ಮಡಿವಾಳನ ತೋರಿದ,
ಎನ್ನ ಮನದಲ್ಲಿ ತನ್ನ ನಿಲವ ತೋರಿದ,
ಎನ್ನ ಅರಿವಿನಲ್ಲಿ ನಿಮ್ಮ ತೋರಿದ,
ಇಂತೀ ತ್ರಿವಿಧಸ್ವಾಯತವನು ಎನ್ನ
ಸರ್ವಾಂಗದಲ್ಲಿ ಪ್ರತಿಷ್ಠಿಸಿ ತೋರಿದ.
ಕೂಡಲಸಂಗಮದೇವಯ್ಯಾ, ಚೆನ್ನಬಸವಣ್ಣನ
ಕರುಣದಿಂದ ಮಡಿವಾಳನೆಂಬ ಪರುಷ ಸಾಧ್ಯವಾಯಿತ್ತೆನಗೆ.
ಎನ್ನ ಮನದಲ್ಲಿ ತನ್ನ ನಿಲವ ತೋರಿದ,
ಎನ್ನ ಅರಿವಿನಲ್ಲಿ ನಿಮ್ಮ ತೋರಿದ,
ಇಂತೀ ತ್ರಿವಿಧಸ್ವಾಯತವನು ಎನ್ನ
ಸರ್ವಾಂಗದಲ್ಲಿ ಪ್ರತಿಷ್ಠಿಸಿ ತೋರಿದ.
ಕೂಡಲಸಂಗಮದೇವಯ್ಯಾ, ಚೆನ್ನಬಸವಣ್ಣನ
ಕರುಣದಿಂದ ಮಡಿವಾಳನೆಂಬ ಪರುಷ ಸಾಧ್ಯವಾಯಿತ್ತೆನಗೆ.