← ವಚನಗಳು
ಅಯ್ಯಾ, ಮರದೊಳಗೆ ಅಗ್ನಿ ಇದ್ದಡೇನಯ್ಯಾ,
ಅಯ್ಯಾ, ಮರದೊಳಗೆ ಅಗ್ನಿ ಇದ್ದಡೇನಯ್ಯಾ,
ಮಥನಿಸಿ ತೋರುವರಿಲ್ಲದನ್ನಕ್ಕರ ಕಾಣಬಹುದೆ
ಜಗದೊಳಗೆ ಕೂಡೆ ಪರಿಪೂರ್ಣ ಶಿವನೆಂದಡೆ
ಅಂತರಂಗದಲ್ಲಿ ಕಾಣಬಹುದೆ ಆದಿ ಲಿಂಗ ಅನಾದಿ ಶರಣನ ಭೇದವ ತಿಳುಹಿ,
ನಿಜಪ್ರಾಣದೊಳಗಿಪ್ಪ ಸುಜ್ಞಾನಲಿಂಗವ ಕರಸ್ಥಲಕ್ಕೆ ತಂದು, ಆ ಕರಸ್ಥಲದ
ಲಿಂಗವನೆನ್ನ ಸರ್ವಾಂಗದೊಳಗೆ ಪ್ರತಿಷ್ಠಿಸಿ ತೋರಿ, ನಿತ್ಯ ನಿಜಲಿಂಗೈಕ್ಯವಹ
ಹೊಲಬಿನ ಹರಿಬ ತೋರಿ, ಮತ್ರ್ಯಲೋಕದೊಳಗೆಲ್ಲಾ ಇಂದು ಮೊದಲಾಗಿ
ಪ್ರಾಣಲಿಂಗದ ಘನವ ಹರಹಿ ಶಿವಭಕ್ತಿಯನುದ್ಧರಿಸಿದನು.
ಕೂಡಲಸಂಗಮದೇವರಲ್ಲಿ, ಚೆನ್ನಬಸವಣ್ಣನೆನ್ನನಾಗುಮಾಡಿ
ಉಳುಹಿದನಾಗಿಇನ್ನು ಮತ್ರ್ಯಲೋಕಕ್ಕೆ ಬಂದಡೆ ಚೆನ್ನಬಸವಣ್ಣನ ಪಾದದಾಣೆ.
ಮಥನಿಸಿ ತೋರುವರಿಲ್ಲದನ್ನಕ್ಕರ ಕಾಣಬಹುದೆ
ಜಗದೊಳಗೆ ಕೂಡೆ ಪರಿಪೂರ್ಣ ಶಿವನೆಂದಡೆ
ಅಂತರಂಗದಲ್ಲಿ ಕಾಣಬಹುದೆ ಆದಿ ಲಿಂಗ ಅನಾದಿ ಶರಣನ ಭೇದವ ತಿಳುಹಿ,
ನಿಜಪ್ರಾಣದೊಳಗಿಪ್ಪ ಸುಜ್ಞಾನಲಿಂಗವ ಕರಸ್ಥಲಕ್ಕೆ ತಂದು, ಆ ಕರಸ್ಥಲದ
ಲಿಂಗವನೆನ್ನ ಸರ್ವಾಂಗದೊಳಗೆ ಪ್ರತಿಷ್ಠಿಸಿ ತೋರಿ, ನಿತ್ಯ ನಿಜಲಿಂಗೈಕ್ಯವಹ
ಹೊಲಬಿನ ಹರಿಬ ತೋರಿ, ಮತ್ರ್ಯಲೋಕದೊಳಗೆಲ್ಲಾ ಇಂದು ಮೊದಲಾಗಿ
ಪ್ರಾಣಲಿಂಗದ ಘನವ ಹರಹಿ ಶಿವಭಕ್ತಿಯನುದ್ಧರಿಸಿದನು.
ಕೂಡಲಸಂಗಮದೇವರಲ್ಲಿ, ಚೆನ್ನಬಸವಣ್ಣನೆನ್ನನಾಗುಮಾಡಿ
ಉಳುಹಿದನಾಗಿಇನ್ನು ಮತ್ರ್ಯಲೋಕಕ್ಕೆ ಬಂದಡೆ ಚೆನ್ನಬಸವಣ್ಣನ ಪಾದದಾಣೆ.