← ವಚನಗಳು

ಅರಸು ವಿಚಾರ, ಸಿರಿಯು, ಶೃಂಗಾರ,

📂 ವಚನಗಳು
✍️ ಬಸವಣ್ಣ
🏷️ ವಚನಗಳು
ಅರಸು ವಿಚಾರ, ಸಿರಿಯು, ಶೃಂಗಾರ,
ಸ್ಥಿರವಲ್ಲ ಮಾನವಾ. ಕೆಟ್ಟಿತ್ತು ಕಲ್ಯಾಣ,
ಹಾಳಾಯಿತ್ತು ನೋಡಾ. ಒಬ್ಬ ಜಂಗಮದ
ಅಭಿಮಾನದಿಂದ ಚಾಳುಕ್ಯರಾಯನ ಆಳಿಕೆ ತೆಗೆಯಿತ್ತು,
ಸಂದಿತ್ತು, ಕೂಡಲಸಂಗಮದೇವಾ ನಿಮ್ಮ ಕವಳಿಗೆಗೆ.
← ವಚನಗಳು ಬಸವಣ್ಣ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.