← ವಚನಗಳು

ಅರಿವಿನ ಆಪ್ಯಾಯನಕ್ಕೆ ಅನುಭಾವವೆ ತೃಪ್ತಿ,

📂 ವಚನಗಳು
✍️ ಬಸವಣ್ಣ
🏷️ ವಚನಗಳು
ಅರಿವಿನ ಆಪ್ಯಾಯನಕ್ಕೆ ಅನುಭಾವವೆ ತೃಪ್ತಿ,
ಅರಿವು ನೆರೆ ಕೂಡಿ, ಆ[ಚಾ]ರವೆ ಪ್ರಾಣವಾಗಿ
ವಿಶ್ರಮಿಸಿದ ಬಳಿಕ, ಶ್ರೀಗುರು ಕೃಪೆಯ ಮಾಡಿದ
ಪ್ರಾಣಲಿಂಗದ ಘನವೆಂತೆಂದಡೆ: ಮತ್ಸ್ಯನುಂಗಿದ ಮಾಣಿಕ್ಯದಂತೆ,
ಮುತ್ತುನುಂಗಿದ ನೀರಿನಂತೆ, ಕಣ್ಣಾಲಿ ನುಂಗಿದ ನೋಟದಂತೆ,
ಬಯಲನೊಳಕೊಂಡ ಬ್ರಹ್ಮಾಂಡದೊಳಗಿಪ್ಪ ಸ್ವಯಾನುಭಾವಿಗಳ
ಅನುಭಾವವ ತೋರಿ ಬದುಕಿಸಾ, ಕೂಡಲಸಂಗಮದೇವಾ
← ವಚನಗಳು ಬಸವಣ್ಣ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.