← ಶ್ರೀಗಣೇಶ
ವಂದಿಸುವದಾದಿಯಲಿ ಗಣನಾಥನ
ವಂದಿಸುವದಾದಿಯಲಿ ಗಣನಾಥನ |
ಸಂದೇಹ ಸಲ್ಲ ಶ್ರೀ ಹರಿಯಾಜ್ಞೆಯಿದಕುಂಟು ||
ಸಂದೇಹ ಸಲ್ಲ ಶ್ರೀ ಹರಿಯಾಜ್ಞೆಯಿದಕುಂಟು ||
ಹಿಂದೆ ರಾವಣ ತಾನು ವಂದಿಸದೆ ಗಜಮುಖನ
ನಿಂದು ತಪವನು ಕೈದು ವರ ಪಡೆಯಲು
ಒಂದು ನಿಮಿಷದಿ ಬಂದು ವಿಘ್ನವನು ಆಚರಿಸಿ
ತಂದ ವರಗಳನೆಲ್ಲ ಧರೆಗೆ ಇಳಿಸಿದನು ||೧||
ನಿಂದು ತಪವನು ಕೈದು ವರ ಪಡೆಯಲು
ಒಂದು ನಿಮಿಷದಿ ಬಂದು ವಿಘ್ನವನು ಆಚರಿಸಿ
ತಂದ ವರಗಳನೆಲ್ಲ ಧರೆಗೆ ಇಳಿಸಿದನು ||೧||
ಅಂದಿನಾ ಬಗೆಯರಿತು ಬಂದು ಹರಿ ಧರ್ಮಜಗೆ
ಮುಂದೆ ಗಣಪನ ಪೂಜಿಸೆಂದು ಪೇಳೆ
ಒಂದೇ ಮನದಲಿ ಬಂದು ಪೂಜಿಸಲು ಗಣನಾಥ
ಹೊಂದಿಸಿದ ನಿರ್ವಿಘ್ನದಿಂದ ರಾಜ್ಯವನು ||೨||
ಮುಂದೆ ಗಣಪನ ಪೂಜಿಸೆಂದು ಪೇಳೆ
ಒಂದೇ ಮನದಲಿ ಬಂದು ಪೂಜಿಸಲು ಗಣನಾಥ
ಹೊಂದಿಸಿದ ನಿರ್ವಿಘ್ನದಿಂದ ರಾಜ್ಯವನು ||೨||
ಇಂದು ಜಗವೆಲ್ಲ ಉಮೆನಂದನನ ಪೂಜಿಸಲು
ಚೆಂದದಿಂದಲಿ ಸಕಲ ಸಿದ್ಧಿಗಳನಿತ್ತು
ತಂದೆ ಸಿರಿಪುರಂದರವಿಠಲನ ಸೇವೆಯೊಳು
ಬಂದ ವಿಘ್ನವ ಕಳೆದಾನಂದವನು ಕೊಡುವ ||೩||
ಚೆಂದದಿಂದಲಿ ಸಕಲ ಸಿದ್ಧಿಗಳನಿತ್ತು
ತಂದೆ ಸಿರಿಪುರಂದರವಿಠಲನ ಸೇವೆಯೊಳು
ಬಂದ ವಿಘ್ನವ ಕಳೆದಾನಂದವನು ಕೊಡುವ ||೩||