← ಶ್ರೀಶಿವ

ಅನುವನರಿಯದೆ, ಆದಿಯ ವಿಚಾರಿಸದೆ

📂 ಶ್ರೀಶಿವ
✍️ ಅಲ್ಲಮ ಪ್ರಭು
🏷️ ವಚನಗಳು
ಅನುವನರಿಯದೆ, ಆದಿಯ ವಿಚಾರಿಸದೆ
ಅನಾದಿಯಲ್ಲಿ ತಾನೆರೆಂಬುದ ನೋಡದೆ
ಸ್ತೋತ್ರವ ಮಾಡಿ ಫಲವೇನು ?
'ನಿಶ್ಶಬ್ದಂ ಬ್ರಹ್ಮ ಉಚ್ಯತೇ' ಎಂಬ ಘನವು
ಹೊಗಳತೆಗೆ ಸಿಕ್ಕುವುದೆ ಎಲೆ ಮರುಳುಗಳಿರಾ ?
ಅನಾದಿಯಲ್ಲಿ ಬಸವಣ್ಣನು ಏಳುನೂರೆಪ್ಪತ್ತು ಅಮರಗಣಂಗಳು ಸಹಿತ
ಮತ್ರ್ಯಕ್ಕೆ ಬಂದನೊಂದು ಕಾರಣದಲ್ಲಿ.
ಬಂದ ಮಣಿಹ ಪೂರೈಸಿತ್ತು-ಸಂದ ಪುರಾತರೆಲ್ಲರೂ ಕೇಳಿ,
ಇಂದು ನೀವೆಲ್ಲರು ನಿಮ್ಮ ನೀವು ತಿಳಿದು ನೋಡಿ
ನಿಜವನೈದುವುದು.
ಇನ್ನು ನಮ್ಮ ಗುಹೇಶ್ವರಲಿಂಗಕ್ಕೆ
ಸುರಾಳದ ಸುಳುಹಿಲ್ಲ
← ಶ್ರೀಶಿವ ಅಲ್ಲಮ ಪ್ರಭು ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.