← ಶ್ರೀಕೃಷ್ಣ

ಎಂತಾದರೂ ಚಿಂತೆ ಬಿಡದು

📂 ಶ್ರೀಕೃಷ್ಣ
✍️ ಪುರಂದರದಾಸ
🏷️ ಕೀರ್ತನೆಗಳು
🎵 ರಾಗ: ಯಮನ್
🥁 ತಾಳ: ಝಪತಾಲ
🎧
ಶ್ರವಣ ಮಾಡಿ
ವಿದ್ವಾನ್ ಶ್ರೀ ಗುರುರಾಜ್
ಎಂತಾದರೂ ಚಿಂತೆ ಬಿಡದು |
ನಿಶ್ಚಿಂತರಾದವರ ನಾನೊಬ್ಬರನು ಕಾಣೆ ||

ಬ್ರಹ್ಮನಿಗೆ ಶಿರವೊಂದು ಭಿನ್ನವಾದ ಚಿಂತೆ
ರಕ್ಕಸರ ಗುರುವಿಗೆ ಕಣ್ಣಿಲ್ಲದ ಚಿಂತೆ |
ಮನ್ಮಥಗೆ ತನುಸುಟ್ಟು ಭಸ್ಮವಾದ ಚಿಂತೆ
ಮುಕ್ಕಣ್ಣ ಶಿವನಿಗೆ ತಿರಿದುಂಬೊ ಚಿಂತೆ ||

ಧರ್ಮನಿಷ್ಠರಿಗೆ ಸುಖದೊಳಿರುವ ಚಿಂತೆ
ದುಷ್ಕರ್ಮಿಗಳಿಗೆ ಪರರ ಕೆಡಿಸುವ ಚಿಂತೆ |
ತಮ್ಮಅರ್ಜುನಗೆ ವೈರಿಯ ಕೊಲ್ಲುವ ಚಿಂತೆ
ಅಣ್ಣ ಭೀಮನಿಗೆ ಅನ್ನ ಸಾಲದ ಚಿಂತೆ ||

ಭಕ್ತರಿಗೆ ಗುರುವಿನಲಿ ಮುಕ್ತಿ ಪಡೆಯುವ ಚಿಂತೆ
ಮುಕ್ತರಿಗೆ ಅನುಕ್ಷಣವು ಹರಿದರ್ಶನದ ಚಿಂತೆ |
ಯುಕ್ತಿ ಬಲ್ಲವರಿಗೆ ತತ್ತ್ವ ಹೇಳುವ ಚಿಂತೆ
ಶಕ್ತ ಪುರಂದರವಿಟ್ಠಲಗೆಮ್ಮ ಸಲಹುವ ಚಿಂತೆ ||
← ಶ್ರೀಕೃಷ್ಣ ಪುರಂದರದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.