← ಶ್ರೀಕೃಷ್ಣ

ಆ ವೇಳೆಯಲಿ ಆರಾರ ಕಾಯ್ದೆಯೊ ದೇವ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಪೂರ್ವೀ
🥁 ತಾಳ: ಝಂಪೆತಾಳ
ಆ ವೇಳೆಯಲಿ ಆರಾರ ಕಾಯ್ದೆಯೊ ದೇವ
ಈ ವೇಳೆಯಲಿ ಎನ್ನ ಕಾಯ್ದರದು ನಿಜವಹುದು ||ಪ||

ಕರೆಯೆ ಕಂಬದಿ ಬಂದು ಹಿರಣ್ಯಕಶಿಪುವ ಕೊಂದೆ
ಶರಣನನು ಪಾಲಿಸುತೆ ಕಾಯ್ದೆಯಂತೆ
ಕರಿರಾಜ ಹರಿಯೆಂದು ಕರೆಯಲಾಕ್ಷಣ ಬಂದು
ಕರುಣದಿಂದಲಿ ಕಾಯ್ದೆಯಂತೆ ಹರಿಯೆ ||1||

ಧರೆಗಧಿಕನಾಥನಾ ತೊಡೆಯನೇರಲು ಕಂಡು
ಜರೆಯಲಾ ಧ್ರುವನ ನೀ ಕಾಯ್ದೆಯಂತೆ
ದುರುಳ ದುಃಶಾಸನ ದ್ರೌಪದಿಯ ಸೀರೆಯ ಸೆಳೆಯೆ
ತರುಣಿಗಕ್ಷಯವಿತ್ತು ಕಾಯ್ದೆಯಂತೆ ಹರಿಯೆ ||2||

ಅಂದು ರಾವಣ ವಿಭೀಷಣನ ನೂಕಲು ಕಂಡು
ಇಂದಿರಾರಮಣ ನೀ ಕಾಯ್ದೆಯಂತೆ
ಮಂದರೋದ್ಧರ ಮಧುಸೂದನ ಮಾಧವ ಗೋ
ವಿಂದ ರಕ್ಷಿಸು ಬಾಡದಾದಿಕೇಶವರಾಯ ||3|
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.