← ಶ್ರೀಕೃಷ್ಣ

ಆರಿಗಾರಿಲ್ಲ ಆಪತ್ಕಾಲದೊಳಗೆ 

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಕಾಂಬೋಧಿ
🥁 ತಾಳ: ಝಂಪೆತಾಳ
ಆರಿಗಾರಿಲ್ಲ ಆಪತ್ಕಾಲದೊಳಗೆ
ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ

ಹಸಿದು ಬಳಲುವಾಗ ಹಗೆ ಕೈಗೆ ಸಿಲುಕಿದಾಗ
ದೆಸೆಗೆಟ್ಟು ಅಧಿಕ ವ್ಯಾಧಿಯಲಿ ಇರುವಾಗ
ಅಸಮಾನನಾದಾಗ ಅತಿ ಭೀತಿಗೊಂಡಾಗ
ಬಿಸಜನಾಭನ ನಾಮ ನೆನೆಕಂಡ್ಯ ಮನವೆ ||1||

ಸಾಲದವರೆಳೆವಾಗ ಚಾಡಿ ಮಾತಿಗೆ ಭೂಪ
ಘಳುಘುಳಿಸುತ ಕೋಪವನು ತೋರಿದಾಗ
ಮೇಲು ತಾನರಿಯದಯೆ ನಿಂದೆ ಹೊಂದಿರುವಾಗ
ನೀಲಮೇಘಶ್ಯಾಮನ ನೆನೆಕಂಡ್ಯ ಮನವೆ || 2||

ಪಂಥದಲಿರುವಾಗ ಪದವಿ ತಪ್ಪಿರುವಾಗ
ದಂತಿಮದವೇರಿ ಬೆನ್ನತ್ತಿದಾಗ
ಕಂತುಪಿತ ಕಾಗಿನೆಲೆಯಾದಿಕೇಶವನ ನಿ-
ಶ್ಚಿಂತೆಯಿಂದಲಿ ನೀನು ನೆನೆಕಂಡ್ಯ ಮನವೆ ||3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.