← ಶ್ರೀನರಸಿಂಹ

ಏನು ಕಾರಣ ಬಾಯಿ ತೆರದಿ- ಪೇಳೆಲೊ

📂 ಶ್ರೀನರಸಿಂಹ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಕಾಂಬೋಧಿ
🥁 ತಾಳ: ಆಟತಾಳ
ಏನು ಕಾರಣ ಬಾಯಿ ತೆರದಿ- ಪೇಳೆಲೊ
ದಾನವಾಂತಕ ಅಹೋಬಲ ನಾರಸಿಂಹನೆ ||ಪ||

ನಿಗಮ ಚೋರನ ಕೊಲಲು ತೆರೆದೆಯೋ ಈ ಬಾಯ
ನಗವ ಬೆನ್ನಲಿ ಹೊತ್ತು ನಡುಗಿ ತೆರೆದೆಯೊ ಬಾಯ- ಭೂ
ಮಿಗಳ್ಳನ ಕೊಂದು ಬಳಲಿ ತೆರೆದೆಯೊ ಬಾಯ
ಜಗವರಿಯೆ ಪೇರುರವಿರಿದ ಪ್ರಹ್ಲಾದ ವರದ
ಅಹೋಬಲ ನಾರಸಿಂಹನೆ ||1||

ಬಲಿಯ ದಾನವ ಬೇಡಲೆಂದು ತೆರೆದೆಯೊ ಬಾಯ
ಛಲದಿಂದ ಕ್ಷತ್ರಿಯರ ಕೊಲಲು ತೆರೆದೆಯೊ ಬಾಯ
ಕುಲಸತಿಯ ಅರಸಿ ಕಾಣದೆ ತೆರೆದೆಯೊ ಬಾಯ
ಮಲೆತು ಮಾವನ ಕೊಂದು ನಿಂದೆ- ಇಂಥ
ಇಳಿಯಬಾರದ ಭೂಮಿಗಿಳಿದ ನಾರಸಿಂಹ ||2||

ನಾರಿಯರ ಚೆಲ್ವಿಕೆಯ ನೋಡಿ ತೆರೆದೆಯೊ ಬಾಯ
ಏರಿ ಅಶ್ವವ ಮೆಟ್ಟಿ ಅಳಲಿ ತೆರೆದೆಯೊ ಬಾಯ
ಮಾರಪಿತ ಕಾಗಿನೆಲೆಯಾದಿಕೇಶವ ರಂಗ
ಧೀರ ಶ್ರೀನಾಥ ಭವನಾಶ ಪೇಳೋ ಪೇಳು
ಏತಕೆ ಅಹೋಬಲ ನರಸಿಂಹನೆ? ||3||
← ಶ್ರೀನರಸಿಂಹ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.