← ಶ್ರೀಕೃಷ್ಣ

ತಾನ್ಯಾರು ತನ್ನ ದೇಹವ್ಯಾರು

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ರೇಗುಪ್ತಿ
🥁 ತಾಳ: ಝಂಪೆತಾಳ
ತಾನ್ಯಾರು ದೇಹವ್ಯಾರು - ದಿವ್ಯ
ಜ್ಞಾನದಲಿ ತಿಳಿದಾತ ಪರಮಯೋಗಿ ||ಪ||

ಸೂತಿಕಾವಸ್ಥೆಯಲಿ ನವಮಾಸ ನೆರೆದಾಗ
ಮಾತೆಯುದರದಿ ಬಂದು ಬೆಳೆದು ನಿಂದು
ಪಾತಕವದೊಂದು ಮೂರುತಿಯಾದ ತನುವೆಂದು
ನೀತಿಯಲಿ ತಿಳಿದಾತ ಪರಮಯೊಗಿ ||1||

ಅಸ್ಥಿಪಂಜರದ ನರಗಳ ತೊಗಲಿನ ಹೊದಿಕೆಯ
ವಿಸ್ತರಿಸಿ ಬಿಗಿದ ಮಾಂಸದ ಬೊಂಬೆಯು
ರಕ್ತ ಮಲ ಮೂತ್ರ ಕೀವಿನ ಪ್ರಳಯದೊಡಲೆಂದು
ಸ್ವಸ್ಥದಿಂ ತಿಳಿದಾತ ಪರಮಯೋಗಿ ||2||

ಘೋರ ನರಕದ ತನುವು ಎಂದು ಮನದಲಿ ತಿಳಿದು
ಗೇರು ಹಣ್ಣಿನ ಬೀಜದಂತೆ ಹೊರಗಿದ್ದು
ಮಾರಪಿತ ಕಾಗಿನೆಲೆಯಾದಿಕೇಶವನ ಪಾದ
ವಾರಿಜವ ನೆನೆದವನೆ ಪರಮಯೋಗಿ ||3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.