← ಶ್ರೀಕೃಷ್ಣ

ನಾರಾಯಣೆನು ಮನವೆ ನರಹರಿಯ ನೆನೆ ಮನವೆ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಕಾಂಬೋಧಿ
🥁 ತಾಳ: ಝಂಪೆತಾಳ
ನಾರಾಯಣೆನು ಮನವೆ ನರಹರಿಯ ನೆನೆ ಮನವೆ
ಘೋರ ದುರಿತಗಳ ಬೆದರಿಸಿ ಓಡಿಸುವುದು ||ಪ||

ಗುರುವಿನುಪದೇಶದಲಿ ಪರಮ ರಹಸ್ಯವನರಿತು
ಮರೆಯದಲೆ ಅಲ್ಲಿ ಅಧಿಕಾರಿಯಾಗೊ
ತಿರುಮಂತ್ರವನು ಜಪಿಸು ತಿರುಲಾಂಛನವ ಧರಿಸು
ಪರಮ ವೈಷ್ಣವರ ಪಂಕ್ತಿಯ ಸೇರು ಮನವೆ ||1||

ಕುಲಛಲಂಗಳ ಬಿಟ್ಟು ಬಲು ಪಾಶಗಳ ತರಿದು
ಹಲವು ಕೊಂಬೆಗೆ ನೀನು ಹರಿದಾಡದೆ
ಸುಲಭದಲಿ ಶ್ರೀಪಾದತೀರ್ಥ ಪ್ರಸಾದವನು
ನೆಲೆಗೊಳಿಸಿ ಆತ್ಮನಿಗೆ ನಿತ್ಯ ಸುಖಿಯಾಗೊ ||2||

ಶೇಷವಿಶೇಷವೆಂದೆನಿಪ ಪರಮಾರ್ಥದೊಳು
ಮೀಸಲಳಿಯದ ಪಾಪರಹಿತನಾಗು
ವಾಸಾಧಿಪತಿ ಕಾಗಿನೆಲೆಯಾದಿಕೇಶವನ
ದಾಸಾನುದಾಸರಿಗೆ ದಾಸ ನೀನಾಗೊ ||3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.