← ಶ್ರೀಕೃಷ್ಣ

ಮುಟ್ಟಬೇಡ ಮುಟ್ಟಬೇಡ ಮುರಹರನ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಧನ್ಯಾಸಿ
🥁 ತಾಳ: ಛಾಪುತಾಳ
ಮುಟ್ಟಬೇಡ ಮುಟ್ಟಬೇಡ ಮುರಹರನ ದಾಸರನು ||ಪ||
ಕಟ್ಟು ಮಾಡಿದ ಯಮನು ತನ್ನ ದೂತರಿಗೆ ||ಅ||

ತಿರುಮಣಿ ತಿರುಚೂರ್ಣ ಶೃಂಗಾರ ಧರಿಸುವರ
ಸಿರಿತುಳಸಿ ವನಮಾಲೆಯಿಂದೊಪ್ಪುವವರ
ತಿರುಮಂತ್ರ ತೀರ್ಥಪ್ರಸಾದಕೊಳಗಾದವರ
ತಿರುಪತಿ ಯಾತ್ರೆಯನು ಮಾಡುವ ಮಹಾತ್ಮರ ||1||

ಬಡವರಾಗಲಿ ಭಾಗ್ಯವಂತರಾಗಲಿ ಅವರು
ಕಡು ಕರ್ಮಿ ಘೋರಪಾತಕರಾಗಲಿ
ನಡೆನುಡಿಗೆ ಮಾಧವನ ಬಿಡದೆ ಕೊಂಡಾಡುವರ
ಗೊಡವೆ ಬೇಡೆಂದು ಯಮಧರ್ಮ ಸಾರಿದನು ||2||

ವಾಸುದೇವನ ವಾಸರವನಾಚರಿಸುವವರ
ಬೇಸರಿಸದೆ ಹರಿಪ್ರಸಂಗ ಮಾಳ್ಪವರ
ಶೇಷಶಯನ ಕಾಗಿನೆಲೆಯಾದಿಕೇಶವನ
ದಾಸಾನುದಾಸರಿಗೆ ದಾಸರಾದವರ ||3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.