← ಶ್ರೀಕೃಷ್ಣ

ತಲ್ಲಣಿಸದಿರು ಕಂಡ್ಯ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಹಿಂದೋಳ
🥁 ತಾಳ: ಝಂಪೆತಾಳ
🎧
ಶ್ರವಣ ಮಾಡಿ
ವಿದ್ವಾನ್ ಶ್ರೀ ಗುರುರಾಜ್
ತಲ್ಲಣಿಸದಿರು ಕಂಡ್ಯ ತಾಳು ಮನವೇ
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ||

ಬೆಟ್ಟದ ತುದಿಯಲ್ಲಿ ಹುಟ್ಟಿರುವ ವೃಕ್ಷಕ್ಕೆ
ಕಟ್ಟೆಯನು ಕಟ್ಟಿ ನೀರೆರೆದವರು ಯಾರೋ |
ಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲು
ಘಟ್ಯಾಗಿ ಸಲಹುವನು ಇದಕೆ ಸಂಶಯಬೇಡ ||

ಅಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲ
ಅಡಿಗಡಿಗೆ ಆಹಾರವಿತ್ತವರು ಯಾರೋ |
ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿ
ಬಿಡದೆ ರಕ್ಷಿಪನಿದಕೆ ಸಂದೇಹ ಬೇಡ ||

ಕಲ್ಲೊಳಗೆ ಹುಟ್ಟಿರುವ ಕ್ರಿಮಿಕೀಟಗಳಿಗೆಲ್ಲ
ಅಲ್ಲಲ್ಲಿ ಆಹಾರವಿತ್ತವರು ಯಾರೋ ।
ಫುಲ್ಲಲೋಚನ ಕಾಗಿನೆಲೆಯಾದಿಕೇಶವನು
ಎಲ್ಲರನು ಸಲಹುವನು ಇದಕೆ ಸಂಶಯಬೇಡ ||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.