← ಶ್ರೀಕೃಷ್ಣ

ಸೇವಕತನದ ರುಚಿಯನೇನರಿದೆಯೊ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
ಸೇವಕತನದ ರುಚಿಯನೇನರಿದೆಯೊದೇವ ಹನುಮರಾಯ ವೈರಾಗ್ಯ ಬೇಡಿ

ಉದಧಿಯನು ದಾಟಿ ಸೀತೆಯ ಕಂಡು ಬಂದಾಗಮದುವೆಯನು ಮಾಡೆನ್ನಬಾರದಿತ್ತೆಪದದಿಂದ ಪಾಷಾಣ ಪೆಣ್ಣ ಮಾಡಿದಾತಗೆಇದೇನಸಾಧ್ಯವೊ ನೀ ಬಯಸಲೊಲ್ಲದೆ||1||

ಕ್ಷಣದಲ್ಲಿ ಸಂಜೀವನ ಪರ್ವತ ತಂದಾಗಹಣ ಹೊನ್ನುಗಳ ಬೇಡ ಬಾರದಿತ್ತೆವಿನಯದ ವಿಭೀಷಣಗೆ ರಾಜ್ಯವನಿತ್ತಂಥಧಣಿಗೆ ಏನಸಾಧ್ಯವೊ ಹನುಮ ನೀನೊಲ್ಲದೆ ||2||

ಸಾರ್ವಭೌಮನು ತಾನೆ ಮೆಚ್ಚಿ ಬಳಿಗೈದಾಗಉರ್ವಿಯನು ಬೇಡಿದಡೆ ಕೊಡದಿಹನೆಸರ್ವವನು ತೊರೆದು ಶ್ರೀ ನೆಲೆಯಾದಿ ಕೇಶವನನಿವ್ರ್ಯಾಜ ಭಕುತಿಯನು ಬೇಡಿಕೊಂಡೆಯೊ ||3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.