← ಶ್ರೀಕೃಷ್ಣ

ಈ ಸೊಬಗು ಇನ್ನಾವ ಕ್ಷೇತ್ರದಲಿ ಕಾಣೆನಾ ಇಲ್ಲಿ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಈ ಸೊಬಗು ಇನ್ನಾವ ಕ್ಷೇತ್ರದಲಿ ಕಾಣೆನಾ ಇಲ್ಲಿ |
ವಾಸುದೇವ ಮುನಿಯಿದ್ದ ಕಾರಣ

ರಾಜಧಾನಿಯ ನೋಡೆ ಇಂದ್ರಭವನಕೆ ಮೇಲು |
ತೇಜದಲಿ ನೋಡೆ ಸೂರ್ಯನದೆ ಸೋಲು ||
ಪೂಜೆದಲಿ ನೋಡೆ ಸರ್ವ ಧರಣಿಗೆ ಮೇಲು |
ಭೋಜನದಲಿ ನೋಡೆ ಅಮೃತಕೆ ಮೇಲು ||1||

ಉತ್ಸಾಹದಲಿ ನೋಡೆ ನಹಿ ಪ್ರತಿ ನಹಿ ಪ್ರತಿ |
ಸತ್ಸಂಗತಿಯ ನೋಡೆ ಬುಧ ಸಂಗತಿ ||
ಸುಚರಿತೆಯ ನೋಡೆ ಶುದ್ಧ ಸತ್ವದ ನೀತಿ |
ಮತ್ಸರ ಮೆರೆದು ನೋಡೆ ಇಲ್ಲೆ ಮುಕುತಿ ||2||

ಓಲಗದಲಿ ನೋಡೆ ಸತ್ಯಲೋಕಕೆ ಸಮ |
ಪೇಳುವ ಕೀರ್ತನೆ ನೋಡು ವೇದಸ್ತೋಮ ||
ಬಾಲ ಉಡುಪಿಯ ಕೃಷ್ಣ ವಿಜಯವಿಠ್ಠಲರೇಯನ |
ತಿಳಿದ ಮಾನವಗೆ ಫಲವು ನಿಷ್ಕಾಮಾ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.