← ಶ್ರೀಕೃಷ್ಣ

ಎಲ್ಲಿದ್ದರೇನು ಶ್ರೀ ಹರಿಗಲ್ಲದವನು

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಎಲ್ಲಿದ್ದರೇನು ಶ್ರೀ ಹರಿಗಲ್ಲದವನು
ನಿಲ್ಲದೆ ಜಪಿಸಿದರೆ ಸಲ್ಲುವನೆ ಸದ್ಗತಿಗೆ

ಕಪ್ಪೆ ಕಮಲದ ಬಳಿಯೆ ತಪ್ಪದೆ ಅನುಗಾಲ |
ಇಪ್ಪುದೈ ಒಂದು ಅರೆ ಘಳಿಗೆ ಬಿಡದೆ ||
ಬಪ್ಪದಿಂದಲಿ ಅದರ ಪರಿಮಳದ ಸೊಬಗ ನೀ- |
ಕಪ್ಪೆ ವಾಸನೆಗೊಂಡು ಹರುಷಪಡಬಲ್ಲುದೆ ||1||

ಹಾಲುಕೆಚ್ಚಲು ಬಳಿಯೆ ತೊಣಸಿ ಹತ್ತಿಕೊಂಡು |
ಕಾಲವನು ಕಳೆವ ಬಗೆ ಬಲ್ಲಿರೆಲ್ಲ ||
ವೇಳೆವೇಳೆಗೆ ಹಸುವ ಕರೆದುಂಬ ನರನಂತೆ |
ಕೀಳು ತೊಣಸಿಯು ಉಂಡು ಹರುಷಪಡಬಲ್ಲ್ಲುದೆ||2||

ತುಳಸಿ ಸಾನ್ನಿಧ್ಯದಲಿ ನೀರುಳ್ಳಿಯನು ಹಾಕಿ |
ಹೊಲಸು ಹೋಗ್ವುದೆ ಹಲವು ಕಾಲಿದ್ದರೆ ||
ತಿಳಿವಳಿಕೆ ಇಲ್ಲದವ ಸಿರಿ ವಿಜಯವಿಠ್ಠಲನ
ಬಳಿಯಲಿದ್ದರೇನು ದೂರಿದ್ದರೇನು ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.