← ಶ್ರೀಗಂಗೆ

ಏನು ಕಾರಣ ಬಂದೆ ಗಂಗೆ

📂 ಶ್ರೀಗಂಗೆ
✍️ ವಿಜಯದಾಸ
🏷️ ಕೀರ್ತನೆಗಳು
ಏನು ಕಾರಣ ಬಂದೆ ಗಂಗೆ |
ನಾನೇನು ಪುಣ್ಯವನು ಮಾಡಿದವನಲ್ಲ

ಕಾಸೀಪುರದಿಂದಲಿ ದೇಶ ನೋಡಲು ಬಂದ್ಯೋ |
ಬೀಸಿ ಬಿಸುಟುವಂಥ ಅಸ್ಥಿಗಾರದೆ ಒಂದ್ಯೋ |
ದಾಸರ ಮಹಿಮೆಯನು ನೋಡುವೆನೆಂದು ಬಂದ್ಯೋ |
ದೋಷವರ್ಜಿತ ವಾರಣಾಸಿ ಕಡಿಯದಲೆ |
ಲೇಸಾಗಿ ತಿಳಿಪುವದು ಭೀಷ್ಮನ ಜನನೀ ||1||

ತಿಲನೀರು ಕುಡಿದು ಧರಿಸಲಾರದೆ ಬಂದ್ಯೋ |
ಮಲಜನರ ದೋಷವನು ಕಳೆವೆನೆಂದು ಬಂದ್ಯೋ |
ಕಲಿಯುಗಕೆ ಈ ಕೃಷ್ಣಾ ಅಧೀನಳೆಂದು ಬಂದ್ಯೋ |
ಸುಲಭ ತ್ರಿದದೇಶ್ವರಿ ಗಂಗೆ ತಡೆಯದಲೆ |
ನಿಲಜಾಲೆ ತಿಳಿಪುವದು ನೀರಜ ನಯನೇ ||2||

ಸುರರ ನಿತ್ಯ ಕರ್ಮಗಳು ನೋಡಲಿ ಬಂದ್ಯೋ |
ಮಜ್ಜನವ ಮಾಡಿಸಿ ಎನ್ನ ಪೊರಿಯಲು ಬಂದ್ಯೋ |
ಮೂಜಗದೊಳು ಪೆಸೆರಾಗಿಪ್ಪೆನೆಂದು ಬಂದ್ಯೋ |
ನಿರ್ಜನ ತಟನಿ ನಿರ್ಗುಣಸಾಂದ್ರೆ ತಡಿಯದಲೆ |
ನಿಜವ ತಿಳುಪುವದು ವಿಜಯವಿಠ್ಠಲಸುತೆ ||3||
← ಶ್ರೀಗಂಗೆ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.