← ಶ್ರೀಕೃಷ್ಣ

ಏನು ಕಾರಣ ಮಲಗಿದಿಯೊ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಏನು ಕಾರಣ ಮಲಗಿದಿಯೊ
ಶ್ರೀನಾಥ ರಘುಕುಲೋದ್ಭವ ದರ್ಭಶಯನಾ

ಸೀತೆ ಪೋದಳು ಎಂದು ಚಿಂತೆಯಲಿ ಮಲಗಿದೆಯೊ
ಸೇತುಗಟ್ಟುವದು ಅಸಾಧ್ಯವೆಂದು ಮಲಗಿದೆಯಾ
ಕೋತಿಗಳ ಕೈಯಲೆ ರಣವಾಗದೆಂದು ಮಲಗಿದೆಯಾ
ಪಾತಕ ಹರದೈತ್ಯ ಭಂಜಾ ತಿಳುಪುವದು
ಜ್ಯೋತಿರ್ಮಯರೂಪ ದರ್ಭಶಯನಾ||1||

ವನವಾಸ ತಿರಗಲಾರೆನೆಂದು ಮಲಗಿದೆಯೊ
ವನಧೀಶ ಮಾರ್ಗವನು ಕೊಡನೆಂದು ಮಲಗಿದೆಯೊ
ದನುಜ ಬಲ್ಲಿದನೆಂಬೊ ವ್ಯಾಕುಲದಿ ಮಲಗಿದೆಯೊ
ಜನನ ಮರಣರಹಿತ ರಾಮ ತಿಳುಹುವದು
ಹನುಮ ವಂದಿತ ಪಾದ ಶ್ರೀದರ್ಭಶಯನಾ ||2||

ಅನಿಲಾರಿ ಅಹರಗೆ ಕರುಣಿಸಿ ಮಲಗಿದೆಯೊ
ವನಜ ಸಂಭವಗೆ ನೀ ಒಲಿಯ ಬಂದು ಮಲಗಿದಿಯೊ
ಮುನಿಗಳು ಸ್ತೋತ್ರವ ಮಾಡಲು ಹಿಗ್ಗಿ ಮಲಗಿದೆಯೊ
ಜನನಾಥ ಜಾನಕಿಕಾಂತ ತಿಳುಪುವದು
ಎನಗೊಲಿದ ವಿಜಯವಿಠ್ಠಲ ದರ್ಭಶಯನಾ ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.