← ಶ್ರೀಕೃಷ್ಣ

ಕೃಷ್ಣ ಎನಗೆ ಬಂದರಿಷ್ಟವ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಕೃಷ್ಣ ಎನಗೆ ಬಂದರಿಷ್ಟವ ಕಳೆದು ನಿನ್ನ
ನಿಷ್ಠೆಯಲಿ ಇರುವಂತೆ ಇಷ್ಟೆ ಮಾತುರವೀಯೋ

ನಿರ್ದೋಷ ಗುಣವಾರುಧಿ
ನಿರ್ಧಾರವಾಗಿ ನುಡಿವೆ
ಸಿದ್ಧಾಂತ ಮತದಲಿ ಪೊದ್ದಿಪದೆ ಸಾಕು ||1||

ಅಜ ಭವಾದ್ಯರು ನಿನ್ನ
ಭಜಿಪರಾರು ದೋಷ
ವ್ರಜದ ಮಾನವ ತಿಳಿದು ಭಜಿಸಬಲ್ಲೆನೆ ದೇವಾ ||2||

ಮಧ್ವ ಸರೋವರದಲ್ಲಿ
ಇದ್ದು ಪೂಜೆಯಗೊಂಬ
ಮುದ್ದು ವಿಜಯವಿಠಲ ಬಿದ್ದೆ ನಿನ್ನಯ ಪದಕೆ ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.