← ಶ್ರೀಗಂಗೆ

ಗೋದೆ ಅತಿ ಪುಣ್ಯ ಸಾಧೆ

📂 ಶ್ರೀಗಂಗೆ
✍️ ವಿಜಯದಾಸ
🏷️ ಕೀರ್ತನೆಗಳು
ಗೋದೆ ಅತಿ ಪುಣ್ಯ ಸಾಧೆ
ಮಾಧವನ ಚರಣಾರವಿಂದೆ ಪಾದೆ

ಇದ್ದಲ್ಲಿ ನಿನ್ನ ಸ್ಮರಣೆಯನು ಮಾಡಲು ಪಾಪ
ಎದ್ದೋಡಿ ತಿರುಗಿ ನೋಡದೆ ಹೋಹವು
ಸದ್ಬಕ್ತಿಯಿಂದ ನಿನ್ನನು ನೋಡಬೇಕೆನುತ
ಉದ್ಯುಕ್ತವಾಗೆ ಬ್ರಹ್ಮಹತ್ಯ ಪರಿಹಾರವೊ ||1||

ಬಂದು ಹರುಷದಲಿ ಕಣ್ಣಲಿ ಕಂಡು ಶಿರವಾಗಿ
ವಂದನೆಯ ಮಾಡಿ ಸಾಷ್ಟಾಂಗೆರಗಲೂ
ಹಿಂದಣ ಶತಕೋಟಿ ದುರಿತ ರಾಸಿಗಳೆಲ್ಲ
ಒಂದು ಉಳಿಯದಂತೆ ಬೆಂದು ಹೋಹವು ||2||

ಅತಿವೇಗದಿಂದ ಬಂದು ಸ್ನಾನವನು ಮಾಡಲು
ಮತಿವಂತರನ ಮಾಡಿ ದುರ್ಮಾರ್ಗ ಬಿಡಿಸಿ
ರತಿಪತಿ ಜನಕ ಸಿರಿ ವಿಜಯವಿಠ್ಠಲನ್ನ
ಸ್ತುತಿಸಿ ಗತಿ ಪಡೆವಂತೆ ಧನ್ಯರನು ಮಾಡುವ ತಾಯಿ||3||
← ಶ್ರೀಗಂಗೆ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.