← ವೈರಾಗ್ಯ

ಚಿಂತೆ ಮಾಡುವುದ್ಯಾಕೆ ಮನವೆ ನೀನು

📂 ವೈರಾಗ್ಯ
✍️ ವಿಜಯದಾಸ
🏷️ ಕೀರ್ತನೆಗಳು
ಚಿಂತೆ ಮಾಡುವುದ್ಯಾಕೆ ಮನವೆ ನೀನು
ಪಿಂತೆನ್ಯೆಸಗಿದ ಕರ್ಮ ಎಂದಿಗಾದರೂ ಬಿಡದು

ಮಗನಾರು ನೀನಾರು ಪೇಳೊ ಸಿದ್ಧ
ನಿಗಮಾರ್ಥಗಳಿಂದ ಸಜ್ಜನರ ಕೇಳೊ
ತಗಿದು ಕಳಿ ಶೋಕದ ಗೋಳು ನಿತ್ಯ
ನಗಧರನ ಭಕ್ತಿಯಲಿ ಸುಖದಲ್ಲಿ ಬಾಳೋ ||1||

ಸಾಹನಶಕ್ತಿಯನ್ನು ಮಾಡೊ ಬರಿದೆ
ಸ್ನೇಹ ಮಾಡಿದರಿಂದ e್ಞನಕ್ಕೆ ಕೇಡು
ತಾಹಾದು ಸ್ಥಿರವೆಂದು ನೋಡೊ ನೀನೂ
ಮಾಹಪದವಿಗೆ ಬಂದೆ ಸುದೃಢವೆ ಬೇಡು||2||

ವಿರಕ್ತಿ ತೊಡು ತೊಡು ಬಿಡದೆ ಎಂದು
ಸಾರಿದೆ ಪೇಳಿ ಧರ್ಮದಲಿನ್ನು ನುಡಿದೆ
ವಾರವಾರಕೆ ಹೀಗೆ ಕೆಡದೇ ಶ್ರಿಂ
ಗಾರ ಶ್ರೀ ವಿಜಯವಿಠ್ಠಲಲೆನ್ನು ದು:ಖಬಡದೆ ||3||
← ವೈರಾಗ್ಯ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.