← ಶ್ರೀದೇವಿ

ಜಯ ಕೃಷ್ಣವೇಣಿ ದುರ್ಜನರ ಗಂಟಲಗಾಣಿ

📂 ಶ್ರೀದೇವಿ
✍️ ವಿಜಯದಾಸ
🏷️ ಕೀರ್ತನೆಗಳು
ಜಯ ಕೃಷ್ಣವೇಣಿ ದುರ್ಜನರ ಗಂಟಲಗಾಣಿ
ನೀ ತಮತಗುಣ ಶ್ರೇಣಿ ನಿತ್ಯ ಕಲ್ಯಾಣಿ

ಹರಜಡಿಯಲಿ ಜನಿಸಿ ಹರಿಪಾದ ಜಲವೆನಿಸಿ
ಮುರಹರನ ವರ್ಣ ಪೆಸರವನೇ ಪೊತ್ತು
ಧರೆಯೊಳಗೆ ಮಹಾಬಳೇಶ್ವರದಲ್ಲಿ ನೆಲೆಯಾಗಿ
ಪೊರಿದೆ ಶರಣಾಗತರ ದುರಿತಗಳ ತರಿದೆ ||1||

ದೋಷರಹಿತಾಥೆರೆಯೊಳು ಸಾಸಿರ ಭಾಗದಲಿ
ಆ ಸಲಿಲ ಬಿಂದು ಪವಮಾನ ಬಂದೂ
ಬೀಸಿದಾ ಸಮಯದಲಿ ಜೀವರಾಸಿಯ ಮೇಲೆ
ಸೂಸಿ ಬೀಳಲು ಕ್ಲೇಶ ಶೋಕ ವಿನಾಶ ||2||

ಅಷ್ಟಾರ್ಥಮಾಸ ಕೃಷ್ಣಪಕ್ಷ ಚತುರ್ದಶಿ
ಕೃಷ್ಣವಾರ ವಿಷ್ಣು ತಾರೆಯಲ್ಲೀ
ಕೃಷ್ಣಕೃಷ್ಣಾ ಎಂದು ನಿಷ್ಠೆಯಿಂದಲಿ ಮನ
ಮುಟ್ಟಿ ಸ್ನಾನವ ಮಾಡೆ ಕಷ್ಟ ಪರಿಹರಿಪ ||3||

ಸೂರಪಾಲಿ ಕಪಟ ಸಂಗಮಛಾಯಾ
ಶ್ರೀ ಶೈಲ ವರ ಚತುಸ್ಥಾನಗಳಲಿ ವಾಸಮಾಡಿ ಇರಲು
ವಾರಣಾಶಿಯ ಫಲಗರೆದು ಜೀವನ್ಮು
ಕ್ತರನು ಮಾಡಿ ಪೊರದೇ ||4||

ಕಲಿಯುಗದಿ ಕೃಷ್ಣಾ ಸ್ನಾನ ಕೃಷ್ಣ ಸ್ಮರಣಿ ವೆ
ಗ್ಗಳವೆಂದು ಅಜನ ಸತಿ ಪೊಗಳಲು
ಜಲನಿಧಿಯ ಉಭಯಮುಖದಲಿ ಕೂಡಿ
ಭಕ್ತರಿಗೆಒಲಿದು ಸಿರಿ ವಿಜಯವಿಠ್ಠಲ ಕಾಣಿಸಿದಿಯಾ||5||
← ಶ್ರೀದೇವಿ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.